SC-ST ಮೀಸಲಾತಿ ಹೆಚ್ಚಳ ನಿರ್ಧಾರ ಚಾರಿತ್ರಿಕವಾಗಿದೆ

Date:

SC-ST ಮೀಸಲಾತಿ ಹೆಚ್ಚಳದ ರಾಜ್ಯ ಸರ್ಕಾರದ ನಿರ್ಧಾರವು ಚಾರಿತ್ರಿಕವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವುದು ಈ ಸಮುದಾಯಗಳ ಬಹುದಿ‌ನಗಳ ಬೇಡಿಕೆ ಆಗಿತ್ತು. ಇದಕ್ಕೆ ಸ್ಪಂದಿಸಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಇದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದರು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ನ್ಯಾಯಮೂರ್ತಿ ಸುಭಾಷ್ ಆಡಿ ಅವರ ವರದಿಗಳ ಶಿಫಾರಸುಗಳಿಗೆ ಅನುಗುಣವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಸಮಾಜದ ದುರ್ಬಲ ವರ್ಗಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯದ ಹಿತ ಆಡಗಿದೆ ಎಂದು ಅವರು ಹೇಳಿದ್ದಾರೆ. ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣಕ್ಕೇನೂ ಇದರಿಂದ ಧಕ್ಕೆ ಆಗುವುದಿಲ್ಲ. ಸರ್ಕಾರವು ಸಮಾಜದ ಎಲ್ಲಾ ಸಮುದಾಯಗಳ ಏಳಿಗೆಗೂ ಬದ್ಧವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...