ಸೆಲ್ಫಿ ಕ್ರೇಜ್ ತೆಗೆಯಿತು ಮೂರು ವಿದ್ಯಾರ್ಥಿಗಳ ಜೀವ

Date:

ರಾಮನಗರ : ಸೆಲ್ಫಿ ತೆಗೆದುಕೊಳ್ಳಲು ಹೋದ ಮೂವರು ವಿದ್ಯಾರ್ಥಿಗಳು ರೈಲಿಗೆ ಸಿಲುಕಿ ದುರ್ಮರಣವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಬಿಡದಿ ಸಮೀಪದ ವಂಡರ್ ಲಾ ಮಂಚನಾಯಕನ ಹಳ್ಳಿಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಗಳ ದೇಹ ಗುರುತು ಸಿಗದಂತೆ ಛಿದ್ರವಾಗಿದೆ.
ಮೃತ ಮೂವರು ಯುವಕರು ರೈಲ್ವೆ ಹಳಿಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸುವಾಗ ರೈಲಿಗೆ ಸಿಲುಕಿದ್ದಾರೆ. ಘಟನೆ ನಡೆದ ಸ್ಥಳ ಯಾರೂ ಓಡಾಡುವ ಸ್ಥಳವಲ್ಲ. ಈ ವಿದ್ಯಾರ್ಥಿಗಳು ರೈಲು ಬರುವುದನ್ನು ನೋಡಿ, ಅದರ ಜೊತೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚು ಸಾಹಸಕ್ಕೆ ಕೈ ಹಾಕಿ ಜೀವವನ್ನು ಕಳೆದುಕೊಂಡಿದ್ದಾರೆ ಎನ್ನಲಾಗಿದೆ.


ಮೃತರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದ್ದು,ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ದೇಹ ಗರುತು ಸಿಗದಂತೆ ಆಗಿರುವುದರಿಂದ ಪತ್ತೆ ಕಾರ್ಯ ವಿಳಂಬವಾಗಿದೆ. ಇನ್ನು ಇವರ ಐಡಿ ಕಾರ್ಡ್ ಇತ್ಯಾದಿ ದಾಖಲೆಗಳು ಸಿಕ್ಕರೆ ಅದರ ಸಹಾಯದಿಂದ ಇವರಾರು ಎಂಬುದನ್ನು ಪತ್ತೆ ಮಾಡಬೇಕಿದೆ.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ ಬಳಕೆ – ರಾಹುಲ್ ಆರೋಪ

ಹರಿಯಾಣದಲ್ಲಿ 25 ಲಕ್ಷ ಮತಗಳ್ಳತನ : 22 ಬಾರಿ ಬ್ರೆಜಿಲ್ ಮಾಡೆಲ್ ಫೋಟೋ...