ಹರಿಯುವ ಹೊಳೆ ಪಕ್ಕದಲ್ಲೆ ಶವಸಂಸ್ಕಾರ

Date:

ಜೀವದ ಹಂಗು ತೊರೆದು ಹರಿಯುವ ಹೊಳೆ ಪಕ್ಕದಲ್ಲೇ ಮೃತರ ಅಂತ್ಯ ಸಂಸ್ಕಾರ ನಡೆದಿರುವ ಘಟನೆ ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯ್ತಿಗೆ ಸೇರಿದ ಅಂಬಿಕಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ವಾರ ಗ್ರಾಮದ ಪಾಪಮ್ಮ ಅವರ ಮಗ ಷಣ್ಮುಖ ಎಂಬವರು ಮೃತಪಟ್ಟಿದ್ದರು. ಸ್ಮಶಾನ ಜಾಗ ಇಲ್ಲದ ಕಾರಣ ಉಡುತೊರೆ ಹಳ್ಳದ ಬಳಿ ಅಂತ್ಯಕ್ರಿಯೆ ಮಾಡಲಾಗಿತ್ತು.

ಸತತ ಮಳೆಯಿಂದಾಗಿ ಉಡುತೊರೆ ಹಳ್ಳ ತುಂಬಿ ಹರಿದ ಪರಿಣಾಮ ಹೂತು ಹಾಕಿದ್ದ ಶವವೇ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಈ ಮಧ್ಯೆ ಶನಿವಾರ ಪಳನಿಯಮ್ಮ ಎಂಬವರು ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಯನ್ನೂ ಉಡುತೊರೆ ಹಳ್ಳದಲ್ಲೇ ಮಾಡಲಾಗಿದೆ. ಹಳ್ಳ ಏನಾದ್ರೂ ಮತ್ತೆ ತುಂಬಿ ಹರಿದರೆ ಶವವೂ ನೀರಿನಲ್ಲೇ ಕೊಚ್ಚಿ ಹೋಗುವ ಆತಂಕವಿದೆ. ಗ್ರಾಮದಲ್ಲಿ ಸ್ಮಶಾನವಿಲ್ಲ. ಸತ್ತವರನ್ನ ಹಳ್ಳದಲ್ಲೇ ಅಂತ್ಯಕ್ರಿಯೆ ಮಾಡುವಂತಾಗಿದೆ. ಸ್ವಾತಂತ್ರ್ಯ ಬಂದಾಗಿನಿಂದ ಸ್ಮಶಾನವಿಲ್ಲದೆ ಶವ ಸಂಸ್ಕಾರಕ್ಕೆ ಪರದಾಡುತ್ತಿದ್ದೇವೆ. ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ನಮಗೆ ವ್ಯವಸ್ಥೆ ಮಾಡಿಲ್ಲ ಎಂದು ಅಂಬಿಕಾಪುರ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ರು..

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...