ಶುಭಮಂಗಳ ರಿಲೀಸ್ ಗೆ ಸಿದ್ದ

Date:

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ಶುಭಮಂಗಳ’ ಚಿತ್ರದ ಟೈಟಲ್ ಇಟ್ಟುಕೊಂಡು ಬಂದಿರುವ ಹೊಸ ಚಿತ್ರ ರಿಲೀಸ್ ಗೆ ಸಜ್ಜಾಗಿದೆ. ಸಖತ್ ಮಜವಾಗಿರುವ ಟೀಸರ್ ಝಲಕ್ ಬಿಡುಗಡೆ ಮಾಡಿ ಕುತೂಹಲ ಹೆಚ್ಚಿಸಿದ್ದ ಚಿತ್ರತಂಡ ಈಗ ಟ್ರೇಲರ್ ಅನಾವರಣ ಮಾಡಿದೆ. ಇತ್ತೀಚೆಗಷ್ಟೇ ರೇಣುಕಾಂಬ ಸ್ಟುಡಿಯೋದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನೆರವೇರಿದ್ದು, ಇಡೀ ಚಿತ್ರತಂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು .

ಈ ವೇಳೆ ನಿರ್ದೇಶಕ ಸಂತೋಷ್ ಗೋಪಾಲ್ ಮಾತನಾಡಿ, ಮದುವೆ ಮನೆಯಲ್ಲಿ ನಡೆಯುವ ಕಥೆ ಇದು. ಮದುವೆ ಮನೆಗೆ ಹೋದರೆ ಅಲ್ಲಿ ಎಮೋಷನ್, ಡ್ರಾಮಾ, ತುಂಬಾ ಕಥೆಗಳು ನಡೆಯುತ್ತಲೆ ಇರುತ್ತದೆ. ಆ ಕಥೆಗಳಲ್ಲಿ ಐದು ಚ್ಯುಸ್ ಮಾಡಿ ಸಿನಿಮಾ ಮಾಡಿದ್ದೇನೆ. ಈ ಚಿತ್ರದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಇಬ್ಬರಿಗೂ ಹೆಚ್ಚಿನ ಪ್ರಾಮುಖ್ಯತೆ ಇದೆ. ಅಕ್ಟೋಬರ್ 14ಕ್ಕೆ ಸಿನಿಮಾ ರಿಲೀಸ್ ಮಾಡುತ್ತಿದ್ದೇವೆ. ಎಲ್ಲರಿಗೂ ಇಷ್ಟವಾಗುತ್ತದೆ ಎಂದು ಭಾವಿಸಿದ್ದೇವೆ. ದಯವಿಟ್ಟು ಬೆಂಬಲ ಕೊಡಿ ಎಂದರು.

ಮದುವೆಗೆ ಮನೆಗೆ ತೆರಳಿ ವಿಭಿನ್ನವಾಗಿ ಪ್ರಮೋಷನ್ ನಡೆಸ್ತಿರುವ ಚಿತ್ರತಂಡ ಬರುವ ಅಕ್ಟೋಬರ್ 14ಕ್ಕೆ ಚಿತ್ರವನ್ನು ತೆರೆಗೆ ತರಲಿದೆ. ಸಾಕಷ್ಟು ಕಿರುಚಿತ್ರಗಳನ್ನು ನಿರ್ಮಿಸಿರುವ ಸಂತೋಷ್ ಗೋಪಾಲ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದು, ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಟುಕೊಂಡು ಸಿನಿಮಾ ರೂಪಿಸಿದ್ದಾರೆ. ಚಿತ್ರದಲ್ಲಿ ಮೇಘನಾ ಗಾಂವ್ಕರ್, ಹಿತಾ ಚಂದ್ರಶೇಖರ್, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಮುಂತಾದವರು ನಟಿಸಿದ್ದು, ಜೂಡಾ ಸ್ಯಾಂಡಿ ಸಂಗೀತ, ರಾಕೇಶ್ ಬಿ ರಾಜ್ ಕ್ಯಾಮೆರಾ, ಸಂತೋಷ್ ನಿರ್ದೇಶನದ ಜೊತೆಗೆ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಅವ್ಯಕ್ತ ಫಿಲ್ಮಂಸ್ ನಡಿ ಸಂತೋಷ್ ಸ್ನೇಹಿತರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...