ಸಿಡಿದೆದ್ದ ರೆಬೆಲ್ ಸ್ಟಾರ್ ಸಿದ್ದು ವಿರುದ್ದ ತೊಡೆ ತಟ್ಟಿರೋ ಮಂಡ್ಯದ ಗಂಡು..!

Date:

ವಸತಿ ಸಚಿವ ಅಂಬರೀಷ್ ಮಾಜಿ ಸಚಿವರಾಗಿರೋದು ಎಲ್ಲರಿಗೂ ಗೊತ್ತಿರೋದೆ. ಆದ್ರೆ ಇದ್ರಿಂದ ಸಿಡಿದೆದ್ದಿರೋ ಅಂಬಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿಎಂ ವಿರುದ್ಧ ಸಮರ ಸಾರಿದ್ದಾರೆ. ಆದ್ರೆ ಅಂಬಿ ಖುದ್ದಾಗಿ ರಾಜೀನಾಮೆ ಪತ್ರ ನೀಡಬೇಕೆಂದು ಡೆಪ್ಯೂಟಿ ಸ್ಪೀಕರ್ ಶಿವಶಂಕರ್ ರೆಡ್ಡಿ ರಾಜೀನಾಮೆಯನ್ನ ತಿರಸ್ಕರಿಸಿದ್ದಾರೆ. ಇನ್ನೂ ಅಂಬಿ ರಾಜೀನಾಮೆಯಿಂದಾಗಿ ಅಭಿಮಾನಿಗಳು ತೀವ್ರ ಬೇಸರಗೊಂಡಿದ್ದಾರೆ. ಅಷ್ಟೇ ಅಲ್ಲ ಸಿ ಎಂ ವಿರುದ್ದ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ರಾಜ್ಯ ಸಚಿವ ಸಂಪುಟ ಪುನಾರಚನೆಯಿಂದ ಸಚಿವ ಸ್ಥಾನ ಕಳೆದುಕೊಂಡ ಮಾಜಿ ಸಚಿವ ಅಂಬರೀಷ್ ಈಗ ತೊಡೆ ತಟ್ಟಿದ್ದಾರೆ. ಸಚಿವ ಸಂಪುಟದಿಂದ ಕೈ ಬಿಡುತ್ತಿದ್ದಂತೆ, ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಿಡಿದೆದ್ದಿದ್ದಾರೆ.
ಆಪ್ತ ಸಹಾಯಕ ಶ್ರೀನಿವಾಸ್ ಮೂಲಕ ಒಂದೇ ಒಂದು ಸಾಲಿನ ರಾಜೀನಾಮೆ ಪತ್ರ ರವಾನಿಸಿರುವ ಅಂಬರೀಷ್, ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ಆದರೆ, ಖುದ್ದು ಆಗಮಿಸಿ ರಾಜೀನಾಮೆ ನೀಡುವಂತೆ ಸೂಚಿಸಿರುವ ಡೆಪ್ಯೂಟಿ ಸ್ಪೀಕರ್ ಶಿವಶಂಕರ್ ರೆಡ್ಡಿ, ಕ್ರಮಬದ್ಧವಾಗಿರದ ರಾಜೀನಾಮೆಯನ್ನು ತಿರಸ್ಕರಿಸಿದ್ದಾರೆ.
ಮತ್ತೊಂದೆಡೆ ಅಂಬಿ ಪತ್ನಿ ಸುಮಲತಾ ಕೂಡಾ ಟ್ವಿಟ್ಟರ್ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ‘ನೇರ, ದಿಟ್ಟ, ಪ್ರಾಮಾಣಿಕತೆಯ ಗುಣಗಳನ್ನು ಅಳವಡಿಸಿಕೊಂಡ ಭ್ರಷ್ಟನಲ್ಲದ ವ್ಯಕ್ತಿ ಇಂದಿನ ಯುದ್ಧ ಗೆಲ್ಲವುದು ಕಷ್ಟ ಸಾಧ್ಯ. ಆದರೆ ಅಂತಿಮ ಗೆಲುವು ಯಾರದು ಎಂಬುದನ್ನು ಸಮಯವೇ ಸಾಬೀತು ಪಡಿಸುತ್ತದೆ’ ಎಂದು ಸುಮಲತಾ ಟ್ವೀಟ್ ಮಾಡಿದ್ದಾರೆ.


 

  • ಶ್ರೀ

POPULAR  STORIES :

ಮಾತಿಲ್ಲದೆ ಮಾತನಾಡೋ ಪುಷ್ಪಕ ವಿಮಾನ..!

ಶಾಸಕ ಸ್ಥಾನಕ್ಕೆ ಅಂಬರೀಷ್ ರಾಜೀನಾಮೆ..!!

68 ನೇ ವಯಸ್ಸಿನ ತಾತ 10ನೇ ತರಗತಿಯ ವಿದ್ಯಾರ್ಥಿ..!!

ಮಹಿಳೆ ಮೇಲೆ ಅತ್ಯಾಚಾರ..! ಭಾರತೀಯ ಆಟಗಾರ ಅರೆಸ್ಟ್ ಯಾರು ಆ ರೇಪಿಸ್ಟ್ ಕ್ರಿಕೆಟರ್…?

ಅಷ್ಟಕ್ಕೂ ರಜನಿ ಹೀಗೇಕೆ ಮಾಡಿದ್ಲು? ಪ್ರೀತಿಸಿದ ಹುಡುಗ ಮತ್ತು ಅಪ್ಪ, ಅಮ್ಮ, ಅಣ್ಣ.!

`ರೋಬೋಫೀಲಿಯಾ’ ಇದು `ಫ್ಯೂಚರ್ ಆಫ್ ಸೆಕ್ಸ್’

ನಿಮ್ಮ ರೂಂಮೇಟ್ ನ ಗೊರಕೆ ತಪ್ಪಿಸಬೇಕೇ?? ಇಲ್ಲಿದೆ ಉಪಾಯ…

ದರ್ಭೆಯನ್ನುಪವಿತ್ರವಾಗಿ ಶುಭ ಹಾಗೂ ಅಶುಭ ‍‍ಸಂದರ್ಭಗಳಲ್ಲಿ ನಮ್ಮಬಲಕೈ ಬೆರಳಲ್ಲಿ ಯಾಕೆ ಧರಿಸುತ್ತೇವೆ????

ಗೀತಾ ಟಂಡನ್ ಖತರ್ನಾಕ್ ಸ್ಟಂಟ್ ಮಹಿಳೆಯ ಕಥೆ..!

Share post:

Subscribe

spot_imgspot_img

Popular

More like this
Related

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಘೋಷಣೆ

ಶಿಕ್ಷಣ ಕ್ಷೇತ್ರಕ್ಕೆ ಸಿಹಿ ಸುದ್ದಿ: 3,000 ಬೋಧಕ ಹುದ್ದೆಗಳ ಭರ್ತಿಗೆ ಸಿಎಂ...

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ...

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್: ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ...

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ?

ಮಹಿಳೆಯರು ರಾತ್ರಿ ಮಲಗುವಾಗ ಬ್ರಾ ಧರಿಸಬಾರದಂತೆ! ಯಾಕೆ ಗೊತ್ತೇ? ಮಹಿಳೆಯರ ದಿನನಿತ್ಯದ ಉಡುಪಿನಲ್ಲಿ...