ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು

Date:

ಬೆಂಗಳೂರು : ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆಯಾಗಿದೆ, ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಹೇಳಲಿ. ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷನಾಯಕ ಸಿದ್ದರಾಮಯ್ಯ, ಪರಿಷ್ಕೃತ ಪಠ್ಯದಲ್ಲಿ ಹಲವು ಮಹನೀಯರ ವ್ಯಕ್ತಿತ್ವ ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ, ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ,
ಪರಿಷ್ಕರಣಾ ಸಮಿತಿಯಲ್ಲಿ ಹಿಂದುಳಿದ ವಿದ್ವಾಂಸರಿಗೆ ಪ್ರಾತಿನಿಧ್ಯ ನೀಡಿಲ್ಲ..? ಕುವೆಂಪುಗಾಗಿರುವ ಅವಮಾನದಿಂದ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ, ಹಿಂದೂಗಳಿಗೆ ಮಾತ್ರವಲ್ಲ, ರಾಜ್ಯದ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಟ್ವೀಟ್ ಮೂಲಕ ಮತ್ತೆ ಪಠ್ಯದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Share post:

Subscribe

spot_imgspot_img

Popular

More like this
Related

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು: ಸಿಎಂ ಸಿದ್ದರಾಮಯ್ಯ

ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ, ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ...

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ!

ನಟ ಉಪೇಂದ್ರ ದಂಪತಿ ಫೋನ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ! ಬೆಂಗಳೂರು: ರಿಯಲ್...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...