No menu items!
3.1 C
Munich
Thursday, April 30, 2026

ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು

Must read

ಬೆಂಗಳೂರು : ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆಯಾಗಿದೆ, ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಹೇಳಲಿ. ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷನಾಯಕ ಸಿದ್ದರಾಮಯ್ಯ, ಪರಿಷ್ಕೃತ ಪಠ್ಯದಲ್ಲಿ ಹಲವು ಮಹನೀಯರ ವ್ಯಕ್ತಿತ್ವ ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ, ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ,
ಪರಿಷ್ಕರಣಾ ಸಮಿತಿಯಲ್ಲಿ ಹಿಂದುಳಿದ ವಿದ್ವಾಂಸರಿಗೆ ಪ್ರಾತಿನಿಧ್ಯ ನೀಡಿಲ್ಲ..? ಕುವೆಂಪುಗಾಗಿರುವ ಅವಮಾನದಿಂದ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ, ಹಿಂದೂಗಳಿಗೆ ಮಾತ್ರವಲ್ಲ, ರಾಜ್ಯದ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಟ್ವೀಟ್ ಮೂಲಕ ಮತ್ತೆ ಪಠ್ಯದ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article