ಎಸ್ ಎಂ ಕೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ

Date:

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್‌ ಆಸ್ಪತ್ರೆಯಿಂದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ ಸುನೀಲ್ ಕಾರಂತ್ ರಿಂದ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದು ವೈದ್ಯರ ತಂಡ ಆರೈಕೆ ಮಾಡ್ತಾ ಇದೆ. ಶ್ವಾಸಕೋಶದ ಒಳಗಡೆ ಆಕ್ಸಿಜನ್ ಪ್ರಮಾಣ ಏರುಪೇರು ಆಗ್ತಾ ಇದ್ದು, ವೈದ್ಯರ ತಂಡ ನಿಗಾವಹಿಸಿದೆ. ಆರೋಗ್ಯ ಸಚಿವ ಡಾ. ಸುಧಾಕರ್ ಮೇಲ್ವಿಚಾರಣೆ ನಡೆಸುತ್ತಾ ಇದ್ದಾರೆ. ಅಲ್ಲದೆ ವೈದ್ಯರ ತಂಡದ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದು ಬುಲೆಟಿನ್‌ ನಲ್ಲಿ ತಿಳಿಸಲಾಗಿದೆ. ಇನ್ನೂ ತೀವ್ರ ಜ್ವರ ಹಿನ್ನೆಲೆ ಶನಿವಾರ ರಾತ್ರಿ 11 ಗಂಟೆವರೆಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾ ಇದ್ದರು. ಐಸಿಯು ಮತ್ತು ಹೆಚ್ಚಿನ ನಿಗಾ ಹಿನ್ನೆಲೆ ಕುಟುಂಬಸ್ಥರು ಅವರನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್ ಮಾಡಿದ್ದಾರೆ. ಸದ್ಯ ಮಣಿಪಾಲ್ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...