ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹುಷಾರ್..!

Date:

ಬೆಂಗಳೂರು : ಬೆಂಗಳೂರಿನಲ್ಲಿ ವಿಪರೀತ ಮಳೆ ಹಿನ್ನೆಲೆ ವಿಷಸರ್ಪಗಳ ಕಾಟ ಹೆಚ್ಚಾಗಿದೆ. ನಿರಂತರ ಮಳೆ ಆಗುತ್ತಿರುವ ಕಾರಣ ಬೆಂಗಳೂರಿನ ಮನೆಗಳಲ್ಲಿ ಹಾವುಗಳು ಬಂದು ಸೇರಿಕೊಳ್ಳುತ್ತಿವೆ. ಜೂನ್ ಹಾಗೂ ಜುಲೈ ತಿಂಗಳು ಹಾವುಗಳ ಸಂತಾನೋತ್ಪತ್ತಿ ಸಮಯ ಆಗಿರುವುದರಿಂದ ಮೊಟ್ಟೆಯೊಡೆದು ಮರಿಗಳು ಹೊರಬರುತ್ತಿವೆ. ಈ ಸಮಯದಲ್ಲಿ ಮಳೆ, ಚಳಿ ಇದ್ದು ಬೆಚ್ಚಗಿನ ಜಾಗ ಹುಡುಕಿಕೊಂಡು ಅವುಗಳು ಸಂಚಾರ ನಡೆಸುತ್ತವೆ. ಹಾಗಾಗಿ, ಮನೆಯಲ್ಲಿರುವ ಎಲ್ಲ ಜಾಗಗಳನ್ನೂ ಪ್ರತಿದಿನ ಶುಚಿಯಾಗಿಡುವಂತೆ ಪಾಲಿಕೆ ಮನವಿ ಮಾಡಿದೆ.

 

ಪ್ರತಿದಿನ ನಗರದಲ್ಲಿ 50ಕ್ಕೂ ಹೆಚ್ಚಿನ ವಿಷಕಾರಿ ಹಾವುಗಳು ಮನೆಯ ಅಡುಗೆ ಕೋಣೆ, ಶೂ ಮುಂತಾದ ಜಾಗದಲ್ಲಿ ಪತ್ತೆಯಾಗುತ್ತಿವೆ. ಪಾಲಿಕೆಯಿಂದ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಹಾವುಗಳನ್ನು ಕಂಡು ಆತಂಕಗೊಳ್ಳದೇ ಕೂಡಲೇ ಪಾಲಿಕೆಯ ಅನಿಮಲ್ ರೆಸ್ಕ್ಯೂ ಟೀಮ್​​ಗೆ ಮಾಹಿತಿ ನೀಡಬಹುದು ಎಂದು ಮೋಹನ್ ಹೇಳಿದರು.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...