ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿದೆ. ನಗರದ ವಿವಿಧೆಡೆ ಷಷ್ಠಿಯನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ಸುಬ್ಬರಾಯನ ಕೆರೆಯ ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಸುಬ್ರಹ್ಮಣ್ಯ ದೇವರ ಮೆರವಣಿಗೆ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಚಾಲನೆ ನೀಡಿದ್ದು, ಮೊಹಲ್ಲಾದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಸಾಗಿತು. ಇನ್ನ ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯುತ್ತಿದ್ದು, ಹಾವಿನ ಹುತ್ತಕ್ಕೆ ತನಿ ಎರೆದು ಪೂಜೆ ಸಲ್ಲಿಸುತ್ತಿದ್ದಾರೆ.