ಸುದೀಪ್ , ಯಶ್ ನನ್ ಮುಂದೆ ಬಚ್ಚಾಗಳು ಎಂದ ತಿಪ್ಪೇಸ್ವಾಮಿ….!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಯಶ್ ನನ್ ಮುಂದೆ ಬಚ್ಚಾಗಳು ಎಂದು ಪಕ್ಷೇತರ ಅಭ್ಯರ್ಥಿ ತಿಪ್ಪೇಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.


ನಾಯಕನಟ್ಟಿಯಲ್ಲಿ ಸುದೀಪ್ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗೆ ಆಗಮಿಸಿದ್ದಕ್ಕೆ ಕೋಪಗೊಂಡ ತಿಪ್ಪೇಸ್ವಾಮಿ, ಸುದೀಪ್ , ಯಶ್ ಇವರೆಲ್ಲಾ ನನ್ನ ಮುಂದೆ ಇನ್ನೂ ಬಚ್ಚಾಗಳು. ನಾನು ಇವರಿಗಿಂತ ಮೊದಲೇ ಬಣ್ಣ ಹಚ್ಚಿದ ಕಲಾವಿದ. ಹೀಗಾಗಿ ಇವರೆಲ್ಲಾ ಪ್ರಚಾರ ಮಾಡಿದರೆ ಜನ ಮರಳಾಗಲ್ಲ…! ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲ್ಲೋದಿಲ್ಲ ಎಂದು ತಿಪ್ಪೇಸ್ವಾಮಿ ಕಿಡಿಕಾರಿದ್ದಾರೆ.


ಬಳ್ಳಾರಿಯವರ ಆಟ ಇಲ್ಲಿ ನಡೆಯೋದಿಲ್ಲ. ಆ ಜನಾರ್ಧನ ರೆಡ್ಡಿಗೆ ಮಾಚಿಗೆ ಆಗ್ಬೇಕು. ಅವರಿಗೆ ಬಿಜೆಪಿಯೊಂದಿಗೆ ಬರಬೇಡಿ ಅಂದರೂ ನಾಚಿಕೆ ಇಲ್ದೇ ಬರ್ತಾರೆ. ಕದ್ದು ಮುಚ್ಚಿ ಪ್ರಚಾರ ಮಾಡ್ತಾರೆ. ನಾಚಿಕೆ ಆಗಲ್ವಾ? ಎಂದು ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪರ ಮಾತಾಡಿರುವ ತಿಪ್ಪೇಸ್ವಾಮಿ , ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆದ್ದೇ ಗೆಲ್ತಾರೆ. ಶ್ರೀರಾಮುಲು ಸೋಲ್ತಾರೆ. ಬಾದಾಮಿಯಲ್ಲಿ ಪ್ರಚಾರ ಮಾಡಲ್ಲ ಅಂದಿದ್ದ ಸುದೀಪ್ ಮೊಳಕಾಲ್ಮೂರು ಕ್ಷೇತ್ರಕ್ಕೆ ಯಾಕೆ ಬಂದ್ರು ಎಂದು ಹರಿಹಾಯ್ದಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...