ಮತ್ತೆ ಒಂದಾದ ಡಾಲಿ-ಚಿಟ್ಟೆ.. ಯಾವ ಚಿತ್ರಕ್ಕಾಗಿ ಗೊತ್ತಾ..?

Date:

ಶಿವಣ್ಣ ಅಭಿನಯದ ಟಗರು ಚಿತ್ರದ ಚಿಟ್ಟೆ ಹಾಗೂ ಡಾಲಿ ಜೋಡಿ ಮತ್ತೆ ಒಂದಾಗಿದೆ. ಹೌದು, ಧನಂಜಯ್ ಹಾಗೂ ವಸಿಷ್ಠ ಕಾಂಬಿನೇಷನ್ ನಲ್ಲಿ ಹೊರ ಬರ್ತಿದೆ ಮತ್ತೊಂದು ಚಿತ್ರ. ಟಗರು ನಂತರ ಇವರಿಬ್ಬರನ್ನು ಒಂದೇ ಸಿನಿಮಾದಲ್ಲಿ ನೋಡಬೇಕು ಎಂಬುದು ಪ್ರೇಕ್ಷಕರ ಕೋರಿಕೆಯಾಗಿತ್ತು. ಈಗ ಈ ಜೋಡಿಯನ್ನು ಒಟ್ಟಿಗೆ ತರುವ ಮೂಲಕ ಅಭಿಮಾನಿಗಳ ಆಸೆ ಈಡೇರಿಸಿದ್ದಾರೆ ನಿರ್ದೇಶಕ ಸಂತೋಷ ಆನಂದ್ ರಾಮ್.ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಯುವರತ್ನ ಚಿತ್ರಕ್ಕೆ ವಿಲನ್ ಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಡಾಲಿ ಹಾಗೂ ಚಿಟ್ಟೆ. ರಾಜಕುಮಾರ ನಂತರ ಮತ್ತೆ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಸಂತೋಷ ಆನಂದ್ ರಾಮ್ ಹಾಗೂ ಪುನೀತ್ ರಾಜ್‍ಕುಮಾರ್. ನಟ ಧನಂಜಯ್ಈ ಚಿತ್ರದಲ್ಲಿ ಖಳನಾಯಕ ಎಂಬುದು ಖಚಿತವಾಗಿದೆ. ಆದರೆ ಚಿಟ್ಟೆ ಅಲಿಯಾಸ್ ವಸಿಷ್ಠ ಸಿಂಹ ಅವರ ಪಾತ್ರ ಹೇಗಿರಲಿದೆ ಎನ್ನುವ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.ಅಲ್ಲದೆ ಬಹಳ ವರ್ಷಗಳಿಂದ ವಸಿಷ್ಠ ಅವರಿಗೆ ಪವರ್ ಸ್ಟಾರ್ ಜೊತೆ ನಟಿಸುವ ಆಸೆ ಇತ್ತು, ಇದೀಗ ಈ ಚಿತ್ರದ ಮೂಲಕ ವಸಿಷ್ಠ ಅವರ ಅನೇಕ ದಿನಗಳ ಕನಸು ಈಡೇರುತ್ತಿದೆ. ಒಟ್ಟಿನಲ್ಲಿ ಟಗರು ನಂತರ ಒಂದಾದ ಈ ಖಡಕ್ ಜೋಡಿ ಯಾವ ರೀತಿ ಕಮಾಲ್ ಮಾಡಲಿದೆ ಎಂಬುದು ಗಾಂಧಿ ನಗರದಲ್ಲಿ ಭಾರಿ ಕುತೂಹಲ ಸೃಷ್ಟಿಸಿದೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...