ಆದೇಶ ಮೇರೆಗೆ ಸಿದ್ದು ಭೇಟಿ ಮಾಡಿದ್ದೇವೆ

Date:

ಬೆಂಗಳೂರು : ವರಿಷ್ಠರ ಆದೇಶ ಮೇರೆಗೆ ಸಿದ್ದು ಭೇಟಿ ಮಾಡಿದ್ದೇವೆ ಎಂದು ಜೆಡಿಎಸ್ ಮುಖಂಡ ಶರವಣ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ನಾಮಪತ್ರ ವಾಪಸ್​ಗೆ ಅಂತಿಮ ದಿನ ವೈಯುಕ್ತಿಕವಾಗಿ ಏನೇ ಇರಲಿ. ಜಾತ್ಯಾತೀತವಾಗಿ ನಾವು ಜೊತೆಯಾಗಿರಬೇಕೆಂದಿದ್ದೇವೆ. ಇನ್ನೂ ಎರಡು ದಿನ ಇದೆ. ಹಾಗಾಗಿ ನೊಡೋಣ ಎಂದು ಹೇಳಿದ್ದಾರೆ. ಯಾರು ಯಾರಿಗೂ ದಾರಿ ತಪ್ಪಿಸಲ್ಲ. ದೇವೇಗೌಡರು, ಸಿದ್ರಾಮಣ್ಣ ರಾಜಕಾರಣಿಗಳೇ. ನಮ್ಮ‌ವರಿಷ್ಠರು ಮಾತನಾಡ್ತಾರೆ. ನಮ್ಮ ಪಕ್ಷದವರು ಯಾರೂ ಭೇಟಿ ಮಾಡಿರಲಿಲ್ಲ. ಹಾಗಾಗಿ ಇಂದು ಭೇಟಿ ಮಾಡಿದ್ದೇವೆ. ಟೀಕೆ ಸಂಧಾನ ಅಲ್ಲವೇ ಅಲ್ಲ. ಪರಿಸ್ಥಿತಿಯಲ್ಲಿ ಜೊತೆಯಲ್ಲಿ ಹೋಗಬೇಕಾದ ಅನಿವಾರ್ಯತೆ ಇದೆ ಎಂದರು. ಕಾಂಗ್ರೆಸ್​ಗೆ ಸಪೋರ್ಟ್ ಮಾಡಬಹುದಲ್ಲ ಎಂಬ ಪ್ರಶ್ನೆಗೆ ಉತ್ತರಿಸಿ, ನಮ್ಮ ಕಿತ್ತಾಟದಿಂದ ಅವರಿಗೆ ಅನುಕೂಲವಾಗಲಿದೆ. ನಮ್ಮದು 13 ಸದಸ್ಯರಿರೋದು. ಅವರಿಗೆ 24 ಸದಸ್ಯರು ಮಾತ್ರ ಇದ್ದಾರೆ. ಹಾಗಾಗಿ, ನಮಗೆ ಬೆಂಬಲ ಕೊಡಿ ಎಂದು ಹೇಳಿದ್ದೇವೆ. ಕುಮಾರಸ್ವಾಮಿಗೆ ಮಾಹಿತಿ ಕೊಡ್ತೇವೆ. ದೇವೇಗೌಡರೇ ನಮ್ಮನ್ನ ಕಳಿಸಿದ್ದು. ಕುಮಾರಸ್ವಾಮಿ ನಮ್ಮ ಪಕ್ಷದ ನಾಯಕರು. ಅವರ ಗಮನಕ್ಕೆ ತಂದೇ ನಾವು ಬಂದಿದ್ದು ಎಂದರು.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ ಚಿತ್ರದುರ್ಗ:...