ಸರ್ಕಾರದ ಘೋಷಣೆಗಳು ಸಂಪೂರ್ಣ ಭೋಗಸ್

Date:

ಸಿಲಿಕಾನ್ ಸಿಟಿ ಬೆಂಗಳೂರು ಕುರಿತು ಸರ್ಕಾರದ ಘೋಷಣೆಗಳು ಸಂಪೂರ್ಣ ಭೋಗಸ್ ಎನ್ನುವುದನ್ನು ಈ ಮಹಾಮಳೆ ಬಯಲು ಮಾಡಿದೆ ಎಂದು ಪರಿಷತ್ ಸದಸ್ಯ ಟಿ. ಎ. ಶರವಣ ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾಯಿತ ಪ್ರತಿನಿಧಿ ಇಲ್ಲದ ಮಹಾನಗರ ಪಾಲಿಕೆ, ಮಳೆಯಲ್ಲಿ ಬಡವರು, ಮಧ್ಯಮ ವರ್ಗದ ಬದುಕು ಕೊಚ್ಚಿ ಹೋಗುತ್ತಿದ್ದರೂ ಕುಂಭಕರ್ಣ ನಿದ್ದೆಗೆ ಶರಣಾದ ಆಧಿಕಾರಿಗಳು, ಇದು ಬೆಂಗಳೂರಿನ ದುರವಸ್ಥೆ ಅಲ್ಲ ಮಹಾ ದುರಂತ. ಮಳೆಯಿಂದ ಎಷ್ಟು ಹಾನಿ ಆಗಿದೆ, ಎಷ್ಟು ಜನರ ಬದುಕು ತತ್ತರವಾಗಿದೆ. ಸರಕಾರ ಕೊಟ್ಟ ನೆರವೇನು? ಇದಕ್ಕೆ ಸರಕಾರದ ಬಳಿ ಉತ್ತರ ಇದೆಯೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಬೆಂಗಳೂರು ಉಸ್ತುವಾರಿ ಮುಖ್ಯಮಂತ್ರಿ ಬಳಿಯೇ ಇದೆ. ಖುದ್ದು ಮುಖ್ಯಮಂತ್ರಿ ಬೊಮ್ಮಾಯಿ ಕೈಗೊಂಡ ಕ್ರಮಗಳೇನು?
ಬೆಂಗಳೂರಿನ ಈ ಮಳೆ ದುರಂತದ ಹಿಂದೆ ದೊಡ್ಡ ಕರ್ಮ ಕಾಂಡವೆ ಇದೆ. ಬಿಬಿಎಂಪಿ ಕಳಪೆ ಮತ್ತು ಭೋಗಸ್ ಕಾಮಗಾರಿಯಲ್ಲಿ ಜನರ ತೆರಿಗೆ ಹಣ ಭ್ರಷ್ಟರ ಪಾಲಾದರೆ, ಭೂಗಳ್ಳರು, ಅಕ್ರಮ ಲೇಔಟ್ ಕಳ್ಳರು, ಕೆರೆ ಕಬಳಿಕೆ ಕೇಡಿಗಳ ಪಡೆ ಬೆಂಗಳೂರಿನ ಈ ದುರವಸ್ಥೆಗೆ ಕಾರಣ ಎಂದು ಶರವಣ ಕಿಡಿಕಾರಿದ್ದಾರೆ. ಮಳೆ ಬಂದಾಗ ಮುಖ್ಯಮಂತ್ರಿ ಸಿಟಿ ರೌoಡ್ಸ್ ಮಾಡುವುದು ಒಂದು ಸಾಂಪ್ರದಾಯಿಕ ನಾಟಕ ಅಥವಾ ಪ್ರಚಾರಕ್ಕೆ ನಡೆಸುವ ಪ್ರಹಸನ ಅಲ್ಲದೇ ಬೇರೇನೂ ಅಲ್ಲ. ಬಂದ ಪುಟ್ಟ ಹೋದ ಪುಟ್ಟ ಎನ್ನುವಂತೆ ನಡೆದುಹೋಗುವ ಈ ಭೇಟಿ ಅರ್ಥವನ್ನೇ ಕಳೆದುಕೊಂಡಿದೆ. ಪದೇ ಪದೇ ಅದೆ ಸ್ಥಿತಿ ಪುನರಾ ವರ್ತನೆ ಆಗಿದೆ. ಎಲ್ಲರು ಸೇರಿ ಬೆಂಗಳೂರು ಉಳಿಸದಿದ್ದರೆ ಅಪಾಯ ಖಂಡಿತ ಎಂದು ಶರವಣ ಬೇಸರ ಹೊರ ಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...