ಗಣಿತದಲ್ಲಿ ಕಡಿಮೆ ಮಾರ್ಕ್ಸ್ ತೆಗೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ!

Date:

 

ಯಾದಗಿರಿ:- ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ‌ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಜರುಗಿದೆ.

ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಶಿಕ್ಷಕನ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸೈದಾಪುರ ಪಟ್ಟಣದಲ್ಲಿರುವ ಮಹಾವೀರ್ ಜೈನ್ ಆಂಗ್ಲ ಮಾಧ್ಯಮ ಖಾಸಗಿ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಕ್ರೌರ್ಯ ನಡೆಯುತ್ತಿದೆ. ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ.

ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಯುವರಾಜ್ ತನ್ನ ಪಾಲಕರಿಗೆ ವಿಷಯ ತಿಳಿಸಿದ್ದು ಶಿಕ್ಷಕನ ವಿರುದ್ಧ ಸೈದಾಪುರ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ

ಎಟಿಎಂಗೆ ಹಾಕಬೇಕಿದ್ದ ₹1 ಕೋಟಿಗೂ ಅಧಿಕ ನಗದು ದೋಚಿ ಸಿಬ್ಬಂದಿ ಪರಾರಿ ಬೆಂಗಳೂರು:...

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್

ಮನರೇಗಾವನ್ನು ಉಳಿಸಲು ಮಂಗಳವಾರ “ಲೋಕಭವನ ಚಲೋ”: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು: ಮನರೇಗಾ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ ಸುಧಾರಣೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಗೆ ಕಠಿಣ ಕ್ರಮ: ಅಲೋಕ್ ಕುಮಾರ್...

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...