ತನ್ನ ಮುಂದೆ ನಗ್ನವಾಗಿ ಸ್ನಾನ ಮಾಡುವಂತೆ ಪೀಡಿಸುತ್ತಿದ್ದ ಕಾಮುಕ ಶಿಕ್ಷಕ ಅರೆಸ್ಟ್

Date:

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಠಿಣ ಕಾನೂನು ಕ್ರಮ ಬರದೆ ಇದ್ರೆ ಲೈಂಗಿಕ ಕಿರುಕುಳ, ದೌರ್ಜನ್ಯಗಳಂತ ಪ್ರಕರಣಗಳು ನಿರಾಳವಾಗಿ ನಡೆಯುತ್ತಲೇ ಇರುತ್ತೆ ಅನ್ನೋದಕ್ಕೆ ಮತ್ತೊಂದು ಸೂಕ್ತ ನಿದರ್ಶನವೊಂದು ದೊರಕಿದೆ. ಗುರುಗಳನ್ನು ದೇವರಂತೆ ಕಾಣುವ ಇಂದಿನ ಸನ್ನಿವೇಶದಲ್ಲಿ ಅವರು ನೋಡೋ ದೃಷ್ಠಿಯೇ ಬೇರೆಯದ್ದಾಗಿರುತ್ತೆ ಅನ್ನೋದಕ್ಕೆ ಈ ಕಾಮುಕ ಶಿಕ್ಷಕನೇ ಸೂಕ್ತ ಉದಾಹರಣೆ. ತನ್ನ ಮಕ್ಕಳಂತಿರುವ ವಿದ್ಯಾರ್ಥಿನಿಯರಿಗೆ ತನ್ನ ಮುಂದೆ ಸ್ನಾನ ಮಾಡುವಂತೆ ಪೀಡಿಸುತ್ತಾ ರಾತ್ರಿ ವೇಳೆ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವನ್ನೆಸಗುತ್ತಿದ್ದ ಕಾಮುಕ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೀಡ್ ಜಿಲ್ಲೆಯ ಶಿರೂರು ತಾಲ್ಲೂಕಿನ ಸರ್ಕಾರಿ ಅನುದಾನಿತ ವಸತಿ ಶಾಲೆಯ ಶಿಕ್ಷಕನೊಬ್ಬ ಅಲ್ಲಿನ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳದ ಆರೋಪದ ಮೇಲೆ ಆತನನ್ನು ಬಂಧಿಸಲಾಗಿದೆ. ವಸತಿ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಲೆಕ್ ಲಡಕಿ ಅಭಿಯಾನ್ ಎಂಬ ಸಲಹಾ ಸಂಸ್ಥೆಗೆ ನೀಡಿದ ದೂರಿನಿಂದಾಗಿ ಕಾಮುಕ ಶಿಕ್ಷಕನ ವಿಕೃತ ಮುಖ ಬಟ್ಟ ಬಯಲಾಗಿದೆ. ಈತ ವಸತಿ ನಿಲಯದಲ್ಲಿನ ವಿದ್ಯಾರ್ಥಿನಿಯರಿಗೆ ಬೆದರಿಕೆ ಹಾಕಿ ತನ್ನ ಮುಂದೆ ಸ್ನಾನ ಮಾಡಲು ಹೇಳುವುದಲ್ಲದೆ ಪ್ರತಿ ದಿನ ರಾತ್ರಿ ನನ್ನೊಂದಿಗೆ ಇದ್ದು ನಾನು ಮಾಡುವ ಲೈಂಗಿಕ ಚೇಷ್ಟೆಗಳಿಗೆ ಸಹಕರಿಸಬೇಕು ಎಂದು ಆಜ್ಞೆ ಮಾಡಿದ್ದನಂತೆ ನೋಡಿ..! ಆತನ ಕಾಮ ದಾಹಕ್ಕೆ ಬಲಿಯಾದ ವಿದ್ಯಾರ್ಥಿಗಳು ಪ್ರತಿ ನಿತ್ಯವೂ ಆತನ ಕಾಟಕ್ಕೆ ರೋಸಿ ಹೋಗಿದ್ದಾರೆ. ಈ ವಿಷಯವನ್ನು ಕಾಮುಕ ಶಿಕ್ಷಕನಿಂದ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದಲ್ಲಿ ನಡೆಯುವ ಅಕ್ರಮಗಳ ಕುರಿತಾಗಿ ಹೇಳಿದಾಗ ಪೋಷಕರು ಆಕೆಯನ್ನು ಶಾಲೆಯಿಂದ ಬಿಡಿಸಿ ಅಪ್ರಾಪ್ತೆಯಾಗಿದ್ರೂ ವಿವಾಹ ಮಾಡಿ ಬಿಟ್ಟಿದ್ದರು. ಮತ್ತೋರ್ವ ಬಾಲಕಿ ನೀಡಿದ ದೂರಿನನ್ವಯ ಪೊಲೀಸರು ಈ ಕಾಮುಕನನ್ನು ಬಂಧಿಸಿದ್ದು ಲೈಂಗಿಕ ದೌರ್ಜನ್ಯದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Like us on Facebook  The New India Times

ತಾಜಾ ಸುದ್ದಿಗಾಗಿ ಇಂದೇ ವಾಟ್ಸಾಪ್ ಮಾಡಿ ರಿಜಿಸ್ಟರ್ ಆಗಿ : 97316 23333

POPULAR  STORIES :

2016ರಲ್ಲಿ ಸಾಮಾನ್ಯವಾಗಿ ಬಳಕೆಯಾದ ಪಾಸ್‍ವರ್ಡ್ ಯಾವುದು ಗೊತ್ತಾ.?

ವಿಶ್ವದ ಅರ್ಧದಷ್ಟು ಸಂಪತ್ತು ಈ ಎಂಟು ಜನರ ಪಾಲು..!!

ಡ್ರಾಪ್ ಕೊಡೋ ನೆಪದಲ್ಲಿ ಮಾನಸಿಕ ಅಸ್ವಸ್ಥೆಯನ್ನೆ ರೇಪ್ ಮಾಡಿದ ಪೊಲೀಸ್..!

ಬಾಯ್ ಫ್ರೆಂಡ್ ಇದಾರಾ..? ಹಾಗಿದ್ರೆ ಮಾತ್ರ ಕಾಲೇಜ್‍ಗೆ ಬನ್ನಿ..!

ಇರ್‍ರೆಸ್ಪಾನ್ಸಿಬಲ್ ಆಟಕ್ಕೆ ನನ್ ******* ಅಂದ ಪ್ರಥಮ್.!!

ಈ ವರ್ಷದಿಂದ ರಿಮೇಕ್ ಮಾಡಲ್ವಂತೆ ಕಿಚ್ಚ ಸುದೀಪ..?

ಸದ್ಯದಲ್ಲೆ ಬೆಂಗಳೂರಲ್ಲಿ ಪ್ರತ್ಯೇಕ ಸೈಬರ್ ಠಾಣೆ: ಪ್ರವೀಣ್ ಸೂದ್

ಸ್ಯಾಂಡಲ್‍ವುಡ್ ಮಿಸ್ಟರ್ ಪರ್ಫೆಕ್ಟ್ ಅಂತೆ ಈ ನಟ..!

Share post:

Subscribe

spot_imgspot_img

Popular

More like this
Related

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ

ಖಾನಾಪುರ ಆನೆಗಳ ಸಾವು: ತನಿಖೆಗೆ ಸಚಿವ ಈಶ್ವರ ಆದೇಶ ಬೆಳಗಾವಿ ಜಿಲ್ಲೆಯ ಖಾನಾಪುರ...

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ ಚುನಾವಣೆಯಲ್ಲಿ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ ಮೈಸೂರು: ಬಿಹಾರ...

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...