ಕೆಲಸ ಸಿಗೋ ಮೊದ್ಲು ಒಬ್ಳು, ಸಿಕ್ಕಮೇಲೆ ಇನ್ನೊಬ್ಳು…

Date:

ಕೆಲಸ ಸಿಗೋ ಮೊದಲು ಬಡ ಹುಡುಗಿಯನ್ನು ಪ್ರೀತಿಸಿ, ಅವಳ ಜೊತೆ ಸುತ್ತಿ, ಲೈಂಗಿಕ ಸಂಪರ್ಕವನ್ನೂ ಹೊಂದಿ, ನಂತರ ಸರ್ಕಾರಿ ಕೆಲಸ ಸಿಕ್ಕಮೇಲೆ ಅವಳನ್ನು ಬಿಟ್ಟು ಇನ್ನೊಬ್ಬಳನ್ನು ಮದುವೆ ಆಗಿದ್ದಾನೆ ಇಲ್ಲೊಬ್ಬ ಭೂಪ.


ಹೌದು, ಇದು ನಡೆದಿರೋದು ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ. ಜಿಲ್ಲೆಯ ಗುಬ್ಬಿ ತಾಲೂಕು ಪಂಚಾಯ್ತಿಯಲ್ಲಿ ಕೆಲಸ ಮಾಡ್ತಿದ್ದ ಮಂಜುನಾಥ್ ಎಂಬಾತನೇ ಹುಡುಗಿಗೆ ಮೋಸ ಮಾಡಿದ ಆರೋಪ ಎದುರಿಸ್ತಾ ಇರೋನು. ಅರೆಗುಜ್ಜಹಳ್ಳಿಯ ಗೌರಮ್ಮ ಎಂಬಾಕೆಯನ್ನು 9 ವರ್ಷದಿಂದ ಪ್ರೀತಿಸಿ, ಆಕೆಯನ್ನು ಲೈಂಗಿಕವಾಗಿಯೂ ಬಳಸಿಕೊಂಡಿದ್ದನಂತೆ. ಸರ್ಕಾರಿ ಉದ್ಯೋಗ ಸಿಕ್ಕಮೇಲೆ ಗೌರಮ್ಮಳನ್ನು ದೂರಮಾಡಿದ್ದಾನೆ..!


ಆಗ ಗೌರಮ್ಮ ಪೋಷಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ…! ಬಳಿಕ ದೇವಸ್ಥಾನದಲ್ಲಿ ಹಾರ ಬದಲಿಸಿ ಇಬ್ಬರಿಗೂ ಮದುವೆ ಮಾಡಲಾಗಿತ್ತಂತೆ. ಆದರೆ, ಮಂಜುನಾಥ್ ಕಲ್ಯಾಣ ಮಂಟಪದಲ್ಲಿ ಮದ್ವೆ ಮಾಡಿಕೊಡ್ಬೇಕು ಅಂತ ಬೇಡಿಕೆ ಇಟ್ಟಿದ್ದನಂತೆ. ಕಲ್ಯಾಣ ಮಂಟಪ ಬುಕ್ ಮಾಡಿ, ಮಂಜುನಾಥ್ ಮನೆಗೆ ಹೋದಾಗ ಮಂಜುನಾಥ್ ಇರಲಿಲ್ಲ. ಮನೆ ಬೀಗಹಾಕಿತ್ತು. ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿದಾಗ ಮಂಜುನಾಥ್ ಬೇರೊಬ್ಬಳನ್ನು ರಿಜಿಸ್ಟರ್ ಮ್ಯಾರೇಜ್ ಆಗಿದ್ದಾನೆಂದು ತಿಳಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...