ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದುರಸ್ತಿಪಡಿಸಿದ ರಸ್ತೆ ಎರಡೇ ದಿನಕ್ಕೆ ಹಾಳಾಗಿರುವ ಸಂಗತಿ ದೇಶವ್ಯಾಪಿ ಸುದ್ದಿಯಾಗಿತ್ತು. ಈ ಸಂಬಂಧ ತನಿಖೆ ನಡೆಸಿರುವ ಬಿಬಿಎಂಪಿ ಪ್ರಧಾನಮಂತ್ರಿ ಕಾರ್ಯಾಲಯಕ್ಕೆ ವರದಿ ಸಲ್ಲಿಸಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.”ಗುಂಡಿ ಬಿದ್ದ ರಸ್ತೆಯಲ್ಲಿ ಪ್ರಧಾನಮಂತ್ರಿಗಳು ಓಡಾಡಿಲ್ಲ.
ಅದು ಪಕ್ಕದ ರಸ್ತೆಯಾಗಿತ್ತು. ಆ ಪ್ರದೇಶ ಸಂಪರ್ಕ ಹೊಂದಿದೆ ಎನ್ನುವ ಕಾರಣಕ್ಕೆ ತಾತ್ಕಾಲಿಕವಾಗಿ ಮುಚ್ಚಲಾಗಿತ್ತು” ಎಂದು ಸ್ಪಷ್ಟನೆ ನೀಡಿದರು. ಪ್ರಧಾನಿ ಸಂಚರಿಸಿದ ಜ್ಞಾನಭಾರತಿ, ಮರಿಯಪ್ಪನಪಾಳ್ಯ ರಸ್ತೆಯಲ್ಲಿ ಗುಂಡಿ ಉಂಟಾಗಿಲ್ಲ. ಆದರೆ, ಅದಕ್ಕೆ ಸಮೀಪದ ರಸ್ತೆಗಳಲ್ಲಿ ಗುಂಡಿಗಳಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.
order lipitor for sale atorvastatin 20mg for sale lipitor over the counter