ಕುಷನ್ ಶಾಪ್ ಗೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ 10 ಲಕ್ಷ ರೂ ಗಳಿಗೂ ಹೆಚ್ಚಿನ ಮೌಲ್ಯದ ವಸ್ತುಗಳು ಹಾಗೂ ನಗದು ನಷ್ಟವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನೀಲೆಕಣಿಯಲ್ಲಿ ಸಂಭವಿಸಿದೆ.
ಕಮಟಾ ಮೂಲದ ತಿಮ್ಮಪ್ಪ ರಾಮಚಂದ್ರ ಎಂಬುವವರಿಗೆ ಸೇರಿದ ಕುಷನ್ ಶಾಪ್ ಇದು. ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ 15ಸಾವಿರಕ್ಕೂ ಹೆಚ್ಚು ನಗದು ಹಾಗೂ 10ಲಕ್ಷ ರೂ ಬೆಲೆ ಬಾಳುವ ವಸ್ತುಗಳು ನಷ್ಟವಾಗಿವೆ.