Vijay Hazare Trophy: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ಪಂದ್ಯಕ್ಕೆ ನಿರಾಕರಣೆ
ಬೆಂಗಳೂರು: ವಿಜಯ್ ಹಜಾರೆ ಟೂರ್ನಿಯ ಮೂಲಕ ಡಿಸೆಂಬರ್ 24ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರ ಪ್ರದೇಶ ತಂಡಗಳ ನಡುವಿನ ಪಂದ್ಯಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಪಂದ್ಯವನ್ನು ಆಯೋಜಿಸುವ ಕನಸು ಹೊಂದಿತ್ತು.
ಸೋಮವಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಸ್ಟೇಡಿಯಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಗ್ನಿಶಾಮಕ ದಳದ ಅಧಿಕಾರಿಗಳ ಸಹ ಪರಿಶೀಲನೆಯ ನಂತರ, ವರದಿ ನಕಾರಾತ್ಮಕವಾಗಿದ್ದು, ಪಂದ್ಯವನ್ನು ಆಯೋಜಿಸಲು ಸೂಕ್ತವಲ್ಲ ಎಂದು ತಿಳಿಸಿತು.
ಈ ಕಾರಣದಿಂದ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯು ಸಾಧ್ಯವಾಗುತ್ತಿಲ್ಲ. ದೆಹಲಿ ಪರ ವಿರಾಟ್ ಕೊಹ್ಲಿ ಕಣಕ್ಕಿಳಿಯುತ್ತಿರುವುದರಿಂದ, ಪಂದ್ಯ ಎಲ್ಲರ ಗಮನದ ಕೇಂದ್ರಬಿಂದುವಾಗಿತ್ತು.
ಸದ್ಯದ ಮಾಹಿತಿ ಪ್ರಕಾರ, ಈ ಮ್ಯಾಚ್ ಅನ್ನು ಆಲೂರಿನಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ನಡೆಸುವ ಸಾಧ್ಯತೆಯಿದೆ. ಆದರೆ ನಾಳೆಯೇ ಈ ಮ್ಯಾಚ್ ನಡೆಯಲಿದೆಯಾ ಎಂಬುದರ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಏಕೆಂದರೆ ನಾಳೆ ಆಲೂರಿನಲ್ಲಿ ಮೂರು ಮ್ಯಾಚ್ಗಳು ನಡೆಯಲಿದೆ.
ಗ್ರೌಂಡ್ ಒಂದರಲ್ಲಿ ಒರಿಸ್ಸಾ ಮತ್ತು ಸೌರಾಷ್ಟ್ರ ಮುಖಾಮುಖಿಯಾದರೆ, ಗ್ರೌಂಡ್ ಎರಡಲ್ಲಿ ಗುಜರಾತ್ ಮತ್ತು ಸರ್ವೀಸಸ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಮೂರನೇ ಗ್ರೌಂಡ್ನಲ್ಲಿ ಹರ್ಯಾಣ ಮತ್ತು ರೈಲ್ವೇಸ್ ಮುಖಾಮುಖಿಯಾಗಲಿದೆ. ಹೀಗಾಗಿ ದೆಹಲಿ ಮತ್ತು ಆಂಧ್ರ ಪ್ರದೇಶ್ ನಡುವಣ ಪಂದ್ಯವನ್ನು ಆಲೂರಿನಲ್ಲೇ ಗುರುವಾರ ಆಯೋಜಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.






