ಇಲ್ಲಿ ನೀರಿನ ಬರದಿಂದ ಮೂತ್ರ ಕುಡಿಯುತ್ತಾರೆ..!

Date:

ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ.‌ ಕುಡಿಯುವ ನೀರಿನ ಸಂರಕ್ಷಣೆ‌ ಮುಖ್ಯ.‌ ಮುಂದೆ ಎದುರಾಗುವ ನೀರಿನ ಅಭಾವವನ್ನು ತಪ್ಪಿಸಲು ಕೆಲವೊಂದು ರಾಷ್ಟ್ರಗಳಲ್ಲಿ ಈಗಾಗಲೇ ಪರ್ಯಾಯ ಮಾರ್ಗ ಕಂಡುಕೊಂಡಿದ್ದಾರೆ.

ಸಿಂಗಾಪೂರ್​ನಲ್ಲಿ ಮಾನವರ ಮೂತ್ರವನ್ನು ಕೂಡ ಕುಡಿಯುವ ನೀರಾಗಿ ಪರಿವರ್ತಿಸಲಾಗುತ್ತಿದೆ ಎಂದರೆ ನಂಬಲೇಬೇಕು. ಸಿಂಗಾಪೂರಿನಂತಹ ಅಭಿವೃದ್ಧಿ ಹೊಂದಿರುವ ದೇಶದಲ್ಲಿ ನೀರಿನ ಅಭಾವ ಉಂಟಾಗಿದೆ. ಈ ಕೊರತೆಯನ್ನು ನೀಗಿಸಲು ಅಲ್ಲಿನ ಸರ್ಕಾರ ಬಳಸಿದ ನೀರನ್ನು ಮರುಬಳಕೆ ಮಾಡುತ್ತಿದೆ.
ಬಾತ್​ರೂಂ ನೀರು, ಅಡುಗೆ ಮನೆಯ ನೀರು ಅಲ್ಲದೆ ಟಾಯ್ಲೆಟ್​ ನೀರನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಕುಡಿಯುವ ನೀರನ್ನಾಗಿ ಪರಿವರ್ತಿಸಲಾಗುತ್ತಿದೆ.
ಇತ್ತೀಚೆಗೆ ಸಿಂಗಾಪೂರ್ ನಗರದಲ್ಲಿ ಟಾಯ್ಲೆಟ್​ ನೀರನ್ನು ಕುಡಿಯುವ ನೀರು ಆಗಿಸಿ ಮಾರಾಟ ಮಾಡುತ್ತಿದೆ ಎನ್ನಲಾಗಿದೆ.
ದೇಶದ ನೀರಿನ ಕೊರತೆಯನ್ನು ನೀಗಿಸಲು ಹೊಸ ತಂತ್ರಜ್ಞಾನವನ್ನು ಕಂಡು ಹಿಡಿದಿರುವ ವಿಜ್ಞಾನಿಗಳು ಟಾಯ್ಲೆಟ್​ ನೀರನ್ನು ಪರೀಷ್ಕರಿಸಿ ಖನಿಜಯುಕ್ತ ಕುಡಿಯುವ ನೀರಾಗಿ ಮಾಡಿದ್ದಾರೆ.
ಆದರೂ ಇದನ್ನು ಕುಡಿಯುವುದು ಹೇಗೆ ಎಂಬುದನ್ನು ಯೋಚಿಸುತ್ತೀರಿ ಅಲ್ವಾ? ಈ ನೀರಿನ ಶುದ್ಧತೆಯನ್ನು ಗಮನಿಸಿದರೆ ಇತರೆ ಎಲ್ಲಾ ನೀರಿಗಿಂತಲೂ ಪರಿಶುದ್ಧವಾಗಿರುತ್ತದೆ ಎಂದು ಸಂಶೋಧಕರು ಭರವಸೆ ನೀಡಿದ್ದಾರೆ.
ಈ ಶುದ್ಧೀಕರಿಸಿದ ನೀರನ್ನು ಮಾರುಕಟ್ಟೆಗೆ ಬಿಡುಗಡೆಗೆ ಮುನ್ನ 1 ಲಕ್ಷಕ್ಕೂ ಹೆಚ್ಚು ಬಾರಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಒಟ್ಟಿನಲ್ಲಿ ನೀರಿನ ಕೊರತೆಯ ಸಮಸ್ಯೆಯನ್ನು ಹೋಗಲಾಡಿಸಲು ಹೊಸ ತಂತ್ರಜ್ಞಾನದ ಮೂಲಕ ಸಿಂಗಾಪೂರ್ ಯಶಸ್ವಿಯಾಗಿದೆ .

Share post:

Subscribe

spot_imgspot_img

Popular

More like this
Related

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...