ಕರ್ನಾಟಕದಲ್ಲಿ ಕನ್ನಡವೇ ಮಾಯ ?

Date:

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಆಯೋಜಿಸಿದ್ದ ‘ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆ ಕನ್ನಡವೇ ಮಾಯವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು. ಇಡೀ ಕಾರ್ಯಕ್ರಮವೇ ಹಿಂದಿಮಯವಾಗಿದ್ದು, ಅಲ್ಲಿ ಕನ್ನಡ ಸಂಪೂರ್ಣವಾಗಿ ಕಡೆಗಣಿಸಲ್ಪಿಟ್ಟಿದೆ. ಇದರಿಂದಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಸೇರಿದಂತೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಬೆಂಗಳೂರು ಇರುವುದು ಕರ್ನಾಟಕದಲ್ಲಿ ಹೊರತು ದೆಹಲಿಯಲ್ಲಿ ಅಲ್ಲ ಎಂದು ಲೇವಡಿ ಮಾಡಿದ್ದಾರೆ. ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ವೇದಿಕೆ ಮೇಲಿನ ಬೋರ್ಡ್‌ನಲ್ಲಿ ಒಂದೇ ಒಂದು ಕನ್ನಡ ಅಕ್ಷರ ಹಾಕಿಲ್ಲ. ಎಲ್ಲೆಡೆ ಹಿಂದಿ ರಾರಾಜಿಸುತ್ತಿರುವ ಪೋಟೋಗಳನ್ನು ಮುಖ್ಯಮಂತ್ರಿ ಟ್ವಿಟ್ ನಲ್ಲಿ ಹಂಚಿಕೊಂಡಿದ್ದಾರೆ. ಆ ಪೋಸ್ಟ್ ಅನ್ನು ಶೇರ್ ಮಾಡುವ ಮೂಲಕ ಕನ್ನಡಿಗರು ಹಿಂದಿ ಹೇರಿಕೆ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...